ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.
ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.
ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…