ಅಂತಾರಾಷ್ಟ್ರೀಯ

ಪ್ರಧಾನಿ ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ

ದುಬೈ : 28ನೇ ಹವಾಮಾನ ಶೃಂಗಸಭೆ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, COP28 ನಲ್ಲಿ ಉತ್ತಮ ಸ್ನೇಹಿತರು ಎಂಬ ಟೈಟಲ್‌ ನೀಡಿದ್ದಾರೆ.

ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿಯೂ ಇಟಲಿ ಪ್ರಧಾನಿ ಜಾರ್ಜಿಯಾ ಅವರು ಮೋದಿ ಅವರೊಂದಿಗೆ ಸ್ನೇಹಿತರಂತೆ ವರ್ತಿಸುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದೀಗ ಅವರು ಪ್ರಧಾನಿ ಮೋದಿಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದು, ಎರಡು ದೇಶಗಳ ನಡುವಿನ ನಿಕಟತೆ ಕಾಣಿಸುತ್ತಿದೆ.

#ಮೆಲೋಡಿ ಎಂಬ ಹ್ಯಾಸ್‌ಟ್ಯಾಗ್‌ ಮೂಲಕ ಪೋಸ್ಟ್‌ ಮಾಡಿದ್ದು, ಉಭಯ ನಾಯಕರ ನಡುವಿನ ಬಾಂದವ್ಯವನ್ನು ತೋರಿಸುತ್ತದೆ. ಇದು ಸಮೃದ್ಧ ಮತ್ತು ಸುಸ್ಥಿರ ಅಭಿವೃದ್ಧಿಯ ದೃಷ್ಠಿಯಿಂದ ಎರಡು ದೇಶಗಳ ಸಹಯೋಗ ಕಾಣುತ್ತಿದೆ ಎಂದು ಸಾರಿದ್ದಾರೆ.

“#COP28 ಶೃಂಗಸಭೆಯಲ್ಲಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದೆನು. ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತ ಮತ್ತು ಇಟಲಿ ನಡುವಿನ ಸಹಯೋಗದ ಪ್ರಯತ್ನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಪಿಎಂ ಮೋದಿ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಯುಎನ್‌ ಹವಾಮಾನ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಿಸರ ಸುಸ್ಥಿರತೆ, ಜಾಗತಿಕ ಇಂಗಾಳ ಹೊರಸೂಸುವಿಕೆ ಇತ್ಯಾದಿ ಗುರಿಗಳನ್ನು ಸಾದಿಸುವಲ್ಲಿ ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರತಿಪಾದಿಸಿದರು. ಹೆಚ್ಚುವರಿಯಾಗಿ, ಕಾರ್ಬನ್ ಸಿಂಕ್‌ಗಳನ್ನು ರಚಿಸುವಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪಿಎಂ ಮೋದಿ “ಗ್ರೀನ್ ಕ್ರೆಡಿಟ್” ಉಪಕ್ರಮವನ್ನು ಪರಿಚಯಿಸಿದರು.

ಯುಎಇಯ ಅಧ್ಯಕ್ಷತೆಯಲ್ಲಿ ನಡೆದ COP28 ಶೃಂಗಸಭೆಯು ಜಾಗತಿಕ ಹವಾಮಾನ ಕ್ರಿಯೆಯ ಮೇಲೆ ಕೇಂದ್ರೀಕರಿಸಿತು. ವಿವಿಧ ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಹಿತಾಸಕ್ತಿಗಳನ್ನು ಚರ್ಚಿಸುವಾಗ ಸ್ವಚ್ಛ ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸಲಾಯಿತು. ಹವಾಮಾನ ಗುರಿಗಳನ್ನು ಸಾಧಿಸಲು ಭಾರತದ ಬದ್ಧತೆಯನ್ನು ಮತ್ತು ಸುಸ್ಥಿರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಐತಿಹಾಸಿಕ ತಪ್ಪುಗಳನ್ನು ಪರಿಹರಿಸುವ ಕುರಿತು ಪ್ರಧಾನಿ ಮೋದಿಯವರು ಒತ್ತಿ ಹೇಳಿದರು.

ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್, ಟರ್ಕಿ ಅಧ್ಯಕ್ಷ ಆರ್‌ಟಿ ಎರ್ಡೋಗನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು ಭಾಗವಹಿಸಿದ್ದರು.

andolanait

Share
Published by
andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

36 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

14 hours ago