ಅಂತಾರಾಷ್ಟ್ರೀಯ

ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಟ್ರಂಪ್‌ ಅನರ್ಹ: ಕೊಲೊರಾಡೋ ಕೋರ್ಟ್

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಕೊಲೊರಾಡೋ ಕೋರ್ಟ್ ಅನರ್ಹಗೊಳಿಸಿದೆ.

ಕ್ಯಾಪಿಟಲ್‌ ಹಿಲ್‌ ದಂಗೆಯಲ್ಲಿ ಟ್ರಂಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಆದೇಶವನ್ನು ಪ್ರಶ್ನಿಸಲು ಜ.4ರವರೆಗೆ ಮೇಲ್ಮನವಿ ಸಲ್ಲಿಸಲು ಟ್ರಂಪ್‌ಗೆ ಅವಕಾಶ ನೀಡಲಾಗಿದೆ.

ಅಮೆರಿಕದ ಇತಿಹಾಸದಲ್ಲಿ ಮಾಜಿ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಳಿಸಿದ್ದು ಇದೇ ಮೊದಲು. ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್‌ ವಕ್ತಾರರು, ಇದೊಂದು ಸಂಪೂರ್ಣ ದೋಷಪೂರಿತ ಆದೇಶ. ಈ ತೀರ್ಪನ್ನು ಪ್ರಶ್ನಿಸಿ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಏನಿದು ಪ್ರಕರಣ?
2021ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಿ ಟ್ರಂಪ್‌ ಪ್ರಚೋದನಕಾರಿ ಭಾಷಣ ಮಾಡಿದ್ದರು. ಭಾಷಣದಿಂದ ಪ್ರಭಾವಿತರಾಗಿ 2 ಸಾವಿರಕ್ಕೂ ಹೆಚ್ಚು ಟ್ರಂಪ್‌ ಬೆಂಬಲಿಗರು ಜನವರಿ 6 ರಂದು ಅಮೆರಿಕದ ಸಂಸತ್‌ ಕಟ್ಟಡ ಅಥವಾ ಕ್ಯಾಪಿಟಲ್‌ ಹಿಲ್‌ ಮೇಲೆ ನುಗ್ಗಿ ದಾಂಧಲೆ ನಡೆಸಿದ್ದರು ಇದರಿಂದಾಗಿ ವಾಷಿಂಗ್ಟನ್‌ನಲ್ಲಿ 15 ದಿನ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಈ ಸಂಬಂಧ ಟ್ರಂಪ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

andolanait

Share
Published by
andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago