ಅಂತಾರಾಷ್ಟ್ರೀಯ

ನಾವು ಯುದ್ಧ ಶುರು ಮಾಡಿಲ್ಲ ಆದರೆ ಮುಗಿಸುತ್ತೇವೆ : ಇಸ್ರೇಲ್‌ ಪ್ರಧಾನಿ

ನವದೆಹಲಿ : ನಮಗೆ ಈ ಯುದ್ಧ ಬೇಕಾಗಿಲ್ಲ, ನಾವು ಯುದ್ಧ ಆರಂಭಿಸಲಿಲ್ಲ, ಆದ್ರೆ ಹಮಾಸ್ ಆರಂಭಿಸಿರುವ ಯುದ್ಧವನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿರುವ ಇಸ್ರೇಲ್‌ ಪ್ರಧಾನಿ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ನಮಗೆ ಈ ಯುದ್ಧ ಬೇಕಾಗಿಲ್ಲ, ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತದಿಂದ ಯುದ್ಧ ಹೇರಲಾಯಿತು. ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ ಅದನ್ನು ಮುಗಿಸುತ್ತದೆ. ಈ ಯುದ್ಧವನ್ನು ಇಸ್ರೇಲ್ ಗೆಲ್ಲುತ್ತದೆ, ನಾವು ಗೆದ್ದಾಗ, ಇಡೀ ನಾಗರಿಕ ಜಗತ್ತು ಗೆಲ್ಲುತ್ತದೆ ಎಂದು ಅವರು ಗುಡುಗಿದ್ದಾರೆ.

ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಹಮಾಸ್ ಉಗ್ರರು ತುಂಬಾ ದೊಡ್ಡ ತಪ್ಪು ಮಾಡಿದ್ದಾರೆ ಒತ್ತಿ ಎಂದು ಒತ್ತಿಹೇಳುತ್ತಾ, ಒಮ್ಮೆ, ಯಹೂದಿ ಜನರು ರಾಷ್ಟ್ರಹೀನರಾಗಿದ್ದರು, ಒಮ್ಮೆ ಯಹೂದಿಗಳು ರಕ್ಷಣೆಯಿಲ್ಲದವರಾಗಿದ್ದರು, ಆದ್ರೆ ಇನ್ಮುಂದೆ ನಾವು ಬೆಲೆಯನ್ನು ನಿಗದಿಪಡಿಸುತ್ತೇವೆ. ಇಸ್ರೇಲ್‌ನ ಇತರ ಶತ್ರುಗಳು ಮುಂಬರುವ ದಶಕಗಳವರೆಗೆ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಸ್ರೇಲಿ ಕುಟುಂಬಗಳನ್ನು ಅವರ ಮನೆಗಳಲ್ಲಿ ಹತ್ಯೆ ಮಾಡಿದೆ, ಹೊರಾಂಗಣ ಉತ್ಸವದಲ್ಲಿ ನೂರಾರು ಯುವಕರನ್ನು ಕಗ್ಗೊಲೆ ಮಾಡಲಾಗಿದೆ. ಹತ್ಯಾಕಾಂಡದಿಂದ ಬದುಕುಳಿದ ಹಲವಾರು ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನ ಅಪಹರಿಸಲಾಗಿದೆ. ಹಮಾಸ್ ಉಗ್ರರು ಮಕ್ಕಳನ್ನೂ ಬಂಧಿಸಿದ್ದಾರೆ, ಕೆಲವರನ್ನ ಸುಟ್ಟುಹಾಕಿದ್ದಾರೆ ಮತ್ತು ಗಲ್ಲಿಗೇರಿಸಿದ್ದಾರೆ ಎಂದು ವಿಷಾದಿಸಿದ್ದಾರೆ.

lokesh

Share
Published by
lokesh

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

59 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago