ಅಂತಾರಾಷ್ಟ್ರೀಯ

ನಾವು ಯುದ್ಧ ಶುರು ಮಾಡಿಲ್ಲ ಆದರೆ ಮುಗಿಸುತ್ತೇವೆ : ಇಸ್ರೇಲ್‌ ಪ್ರಧಾನಿ

ನವದೆಹಲಿ : ನಮಗೆ ಈ ಯುದ್ಧ ಬೇಕಾಗಿಲ್ಲ, ನಾವು ಯುದ್ಧ ಆರಂಭಿಸಲಿಲ್ಲ, ಆದ್ರೆ ಹಮಾಸ್ ಆರಂಭಿಸಿರುವ ಯುದ್ಧವನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿರುವ ಇಸ್ರೇಲ್‌ ಪ್ರಧಾನಿ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ನಮಗೆ ಈ ಯುದ್ಧ ಬೇಕಾಗಿಲ್ಲ, ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತದಿಂದ ಯುದ್ಧ ಹೇರಲಾಯಿತು. ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ ಅದನ್ನು ಮುಗಿಸುತ್ತದೆ. ಈ ಯುದ್ಧವನ್ನು ಇಸ್ರೇಲ್ ಗೆಲ್ಲುತ್ತದೆ, ನಾವು ಗೆದ್ದಾಗ, ಇಡೀ ನಾಗರಿಕ ಜಗತ್ತು ಗೆಲ್ಲುತ್ತದೆ ಎಂದು ಅವರು ಗುಡುಗಿದ್ದಾರೆ.

ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಹಮಾಸ್ ಉಗ್ರರು ತುಂಬಾ ದೊಡ್ಡ ತಪ್ಪು ಮಾಡಿದ್ದಾರೆ ಒತ್ತಿ ಎಂದು ಒತ್ತಿಹೇಳುತ್ತಾ, ಒಮ್ಮೆ, ಯಹೂದಿ ಜನರು ರಾಷ್ಟ್ರಹೀನರಾಗಿದ್ದರು, ಒಮ್ಮೆ ಯಹೂದಿಗಳು ರಕ್ಷಣೆಯಿಲ್ಲದವರಾಗಿದ್ದರು, ಆದ್ರೆ ಇನ್ಮುಂದೆ ನಾವು ಬೆಲೆಯನ್ನು ನಿಗದಿಪಡಿಸುತ್ತೇವೆ. ಇಸ್ರೇಲ್‌ನ ಇತರ ಶತ್ರುಗಳು ಮುಂಬರುವ ದಶಕಗಳವರೆಗೆ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಸ್ರೇಲಿ ಕುಟುಂಬಗಳನ್ನು ಅವರ ಮನೆಗಳಲ್ಲಿ ಹತ್ಯೆ ಮಾಡಿದೆ, ಹೊರಾಂಗಣ ಉತ್ಸವದಲ್ಲಿ ನೂರಾರು ಯುವಕರನ್ನು ಕಗ್ಗೊಲೆ ಮಾಡಲಾಗಿದೆ. ಹತ್ಯಾಕಾಂಡದಿಂದ ಬದುಕುಳಿದ ಹಲವಾರು ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನ ಅಪಹರಿಸಲಾಗಿದೆ. ಹಮಾಸ್ ಉಗ್ರರು ಮಕ್ಕಳನ್ನೂ ಬಂಧಿಸಿದ್ದಾರೆ, ಕೆಲವರನ್ನ ಸುಟ್ಟುಹಾಕಿದ್ದಾರೆ ಮತ್ತು ಗಲ್ಲಿಗೇರಿಸಿದ್ದಾರೆ ಎಂದು ವಿಷಾದಿಸಿದ್ದಾರೆ.

lokesh

Share
Published by
lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago