ನವದೆಹಲಿ : ನಮಗೆ ಈ ಯುದ್ಧ ಬೇಕಾಗಿಲ್ಲ, ನಾವು ಯುದ್ಧ ಆರಂಭಿಸಲಿಲ್ಲ, ಆದ್ರೆ ಹಮಾಸ್ ಆರಂಭಿಸಿರುವ ಯುದ್ಧವನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿರುವ ಇಸ್ರೇಲ್ ಪ್ರಧಾನಿ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ನಮಗೆ ಈ ಯುದ್ಧ ಬೇಕಾಗಿಲ್ಲ, ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತದಿಂದ ಯುದ್ಧ ಹೇರಲಾಯಿತು. ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ ಅದನ್ನು ಮುಗಿಸುತ್ತದೆ. ಈ ಯುದ್ಧವನ್ನು ಇಸ್ರೇಲ್ ಗೆಲ್ಲುತ್ತದೆ, ನಾವು ಗೆದ್ದಾಗ, ಇಡೀ ನಾಗರಿಕ ಜಗತ್ತು ಗೆಲ್ಲುತ್ತದೆ ಎಂದು ಅವರು ಗುಡುಗಿದ್ದಾರೆ.
ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಹಮಾಸ್ ಉಗ್ರರು ತುಂಬಾ ದೊಡ್ಡ ತಪ್ಪು ಮಾಡಿದ್ದಾರೆ ಒತ್ತಿ ಎಂದು ಒತ್ತಿಹೇಳುತ್ತಾ, ಒಮ್ಮೆ, ಯಹೂದಿ ಜನರು ರಾಷ್ಟ್ರಹೀನರಾಗಿದ್ದರು, ಒಮ್ಮೆ ಯಹೂದಿಗಳು ರಕ್ಷಣೆಯಿಲ್ಲದವರಾಗಿದ್ದರು, ಆದ್ರೆ ಇನ್ಮುಂದೆ ನಾವು ಬೆಲೆಯನ್ನು ನಿಗದಿಪಡಿಸುತ್ತೇವೆ. ಇಸ್ರೇಲ್ನ ಇತರ ಶತ್ರುಗಳು ಮುಂಬರುವ ದಶಕಗಳವರೆಗೆ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇಸ್ರೇಲಿ ಕುಟುಂಬಗಳನ್ನು ಅವರ ಮನೆಗಳಲ್ಲಿ ಹತ್ಯೆ ಮಾಡಿದೆ, ಹೊರಾಂಗಣ ಉತ್ಸವದಲ್ಲಿ ನೂರಾರು ಯುವಕರನ್ನು ಕಗ್ಗೊಲೆ ಮಾಡಲಾಗಿದೆ. ಹತ್ಯಾಕಾಂಡದಿಂದ ಬದುಕುಳಿದ ಹಲವಾರು ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನ ಅಪಹರಿಸಲಾಗಿದೆ. ಹಮಾಸ್ ಉಗ್ರರು ಮಕ್ಕಳನ್ನೂ ಬಂಧಿಸಿದ್ದಾರೆ, ಕೆಲವರನ್ನ ಸುಟ್ಟುಹಾಕಿದ್ದಾರೆ ಮತ್ತು ಗಲ್ಲಿಗೇರಿಸಿದ್ದಾರೆ ಎಂದು ವಿಷಾದಿಸಿದ್ದಾರೆ.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…