ಜೆ.ಬಿ ರಂಗಸ್ವಾಮಿ

ಜೋರು ಮಳೆ: ಚಿಕ್ಕಮಗಳೂರು ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಅದರಲ್ಲೂ ಚಿಕ್ಕಮಗಳೂರು ಭಾಗಗಳಲ್ಲಿ ಭೂಕುಸಿತ, ಗುಡ್ಡಕುಸಿತವಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ.

ಈಗಾಗಲೇ ನದಿ ತೀರ, ತಗ್ಗುಪ್ರದೇಶ ಸೇರಿದಂತೆ ಅಪಾಯಕಾರಿ ಸ್ಥಳಕ್ಕೆ ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಜತೆಗೆ ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ಕೂಡ ನಿಷೇಧಿಸಲಾಗಿದೆ. ಹೀಗಾಗಿ ಮಳೆ ಕಡಿಮೆಯಾಗುವವರೆಗೂ ಪ್ರವಾಸ ಮುಂದೂಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಮನವಿ ಮಾಡಿದ್ದಾರೆ.

ಕರವಾಳಿ, ಮಲೆನಾಡು ಹಾಗೂ ಬಯಲು ಸೀಮೆಯಾದ್ಯಂತ ಗಾಳಿ ಸಮೇತ ಜೋರು ಮಳೆ ಸುರಿಯುತ್ತಿದ್ದು, ವರುಣನ ಆರ್ಭಟ ಮುಂದುವರೆದಿದೆ. ಕುದುರೆಮುಖ, ಕಳಸ, ಮೂಡಿಗೆರೆ, ಶೃಂಗೇರಿ, ಚಾರ್ಮಾಡಿ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ ಭದ್ರಾ, ಹೇಮಾವತಿ ನದಿಗಳು ತುಂಬಿ ಅಪಾಯಮಟ್ಟ ಮೀರಿ ಹರಿಯುತ್ತಿದೆ.

ಒಟ್ಟಾರೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಾರು ಅವಾಂತರಗಳು ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮಳೆ ಕಡಿಮೆಯಾಗುವವರೆಗೂ ಪ್ರವಾಸಕ್ಕೆ ಬರದಂತೆ ಸೂಚಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

4 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

4 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

5 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

6 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

6 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

7 hours ago