ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಅದರಲ್ಲೂ ಚಿಕ್ಕಮಗಳೂರು ಭಾಗಗಳಲ್ಲಿ ಭೂಕುಸಿತ, ಗುಡ್ಡಕುಸಿತವಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ.
ಈಗಾಗಲೇ ನದಿ ತೀರ, ತಗ್ಗುಪ್ರದೇಶ ಸೇರಿದಂತೆ ಅಪಾಯಕಾರಿ ಸ್ಥಳಕ್ಕೆ ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಜತೆಗೆ ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ಕೂಡ ನಿಷೇಧಿಸಲಾಗಿದೆ. ಹೀಗಾಗಿ ಮಳೆ ಕಡಿಮೆಯಾಗುವವರೆಗೂ ಪ್ರವಾಸ ಮುಂದೂಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.
ಕರವಾಳಿ, ಮಲೆನಾಡು ಹಾಗೂ ಬಯಲು ಸೀಮೆಯಾದ್ಯಂತ ಗಾಳಿ ಸಮೇತ ಜೋರು ಮಳೆ ಸುರಿಯುತ್ತಿದ್ದು, ವರುಣನ ಆರ್ಭಟ ಮುಂದುವರೆದಿದೆ. ಕುದುರೆಮುಖ, ಕಳಸ, ಮೂಡಿಗೆರೆ, ಶೃಂಗೇರಿ, ಚಾರ್ಮಾಡಿ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ ಭದ್ರಾ, ಹೇಮಾವತಿ ನದಿಗಳು ತುಂಬಿ ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಒಟ್ಟಾರೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಾರು ಅವಾಂತರಗಳು ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮಳೆ ಕಡಿಮೆಯಾಗುವವರೆಗೂ ಪ್ರವಾಸಕ್ಕೆ ಬರದಂತೆ ಸೂಚಿಸಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…