ಮೈಸೂರು: 60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2011ರ ಜನಗಣತಿ ಪ್ರಕಾರ 5 ಕೋಟಿಗೂ ಹೆಚ್ಚಿನ ಜನತೆಗೆ ಆಹಾರ ನೀಡುತ್ತಿದ್ದೇವೆ. ಕಳೆದ ಮೂರು ವರ್ಷದ ಅವಧಿಯಲ್ಲಿ ಯಾವುದೇ ನಷ್ಟವಿಲ್ಲದೆ ನಡೆಸಿಕೊಂಡು ಬಂದಿದ್ದೇವೆ. ನಾಲ್ಕು ತಿಂಗಳ ಅವಧಿಗೆ ಬೇಕಾದ ಆಹಾರ ದಾನ್ಯವನ್ನ ಶೇಖರಣ ಘಟಕದಲ್ಲಿ ಶೇಖರಣೆ ಮಾಡುತ್ತೇವೆ. 60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10ಕೆಜಿ ಅಕ್ಕಿ ನೀಡುತ್ತಿದ್ದೇವೆ. ರಾಜ್ಯದಲ್ಲಿ ಇರುವ 60 ವರ್ಷ ಮೇಲ್ಪಟ್ಟವರ ಬಗ್ಗೆ ರಾಜ್ಯ ಸರ್ಕಾರ ನಮಗೆ ಮಾಹಿತಿ ನೀಡಿಲ್ಲ. ಇದು ನಮ್ಮ ದುರ್ದೈವವೇ ಆಗಿದೆ. ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲ್ಲ ಎಂದು ಹೇಳಿದ್ರು. ಈ ಯೋಜನೆ ಘೋಷಣೆ ಮಾಡುವಾಗ ನಮ್ಮ ಜೊತೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ 50 ಲಕ್ಷ ಟನ್ ಅಕ್ಕಿಯನ್ನ ರೈತರು ಬೆಳೆಯುತ್ತಾರೆ. ಈ ಎಲ್ಲಾ ವಿಚಾರವನ್ನ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿದ್ದೇವೆ. ಇದನ್ನ ಕೇಂದ್ರ ಆಹಾರ ಸಚಿವರಿಗೆ ತಿಳಿಸುತ್ತೇವೆ ಎಂದು ಭಾರತೀಯ ಆಹಾರ ನಿಗಮ ಕುರಿತು ಮಾಹಿತಿ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…