ಮೈಸೂರು ನಗರ

60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೈಸೂರು: 60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2011ರ ಜನಗಣತಿ ಪ್ರಕಾರ 5 ಕೋಟಿಗೂ ಹೆಚ್ಚಿನ ಜನತೆಗೆ ಆಹಾರ ನೀಡುತ್ತಿದ್ದೇವೆ. ಕಳೆದ ಮೂರು ವರ್ಷದ ಅವಧಿಯಲ್ಲಿ ಯಾವುದೇ ನಷ್ಟವಿಲ್ಲದೆ ನಡೆಸಿಕೊಂಡು ಬಂದಿದ್ದೇವೆ. ನಾಲ್ಕು ತಿಂಗಳ ಅವಧಿಗೆ ಬೇಕಾದ ಆಹಾರ ದಾನ್ಯವನ್ನ ಶೇಖರಣ ಘಟಕದಲ್ಲಿ ಶೇಖರಣೆ ಮಾಡುತ್ತೇವೆ. 60 ವರ್ಷ ಮೇಲ್ಪಟ್ಟವರಿಗೆ ಅನ್ನಪೂರ್ಣ ಯೋಜನೆಯಡಿ 10ಕೆಜಿ ಅಕ್ಕಿ ನೀಡುತ್ತಿದ್ದೇವೆ. ರಾಜ್ಯದಲ್ಲಿ ಇರುವ 60 ವರ್ಷ ಮೇಲ್ಪಟ್ಟವರ ಬಗ್ಗೆ ರಾಜ್ಯ ಸರ್ಕಾರ ನಮಗೆ ಮಾಹಿತಿ ನೀಡಿಲ್ಲ. ಇದು ನಮ್ಮ ದುರ್ದೈವವೇ ಆಗಿದೆ. ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲ್ಲ ಎಂದು ಹೇಳಿದ್ರು. ಈ ಯೋಜನೆ ಘೋಷಣೆ ಮಾಡುವಾಗ ನಮ್ಮ ಜೊತೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ 50 ಲಕ್ಷ ಟನ್ ಅಕ್ಕಿಯನ್ನ ರೈತರು ಬೆಳೆಯುತ್ತಾರೆ. ಈ ಎಲ್ಲಾ ವಿಚಾರವನ್ನ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿದ್ದೇವೆ. ಇದನ್ನ ಕೇಂದ್ರ ಆಹಾರ ಸಚಿವರಿಗೆ ತಿಳಿಸುತ್ತೇವೆ ಎಂದು ಭಾರತೀಯ ಆಹಾರ ನಿಗಮ ಕುರಿತು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

17 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

28 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago