ಮೈಸೂರು ನಗರ

ಪ್ಲಾಸ್ಟಿಕ್‌ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಇಂದು ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಾಗರಹೊಳೆ, ಮೇಟಿಕುಪ್ಪೆ, ಕಲಹಳ್ಳ ಮತ್ತು ವೀರನಹೊಸಹಳ್ಳಿ ವಲಯಗಳ ಚೆಕ್ ಪೋಸ್ಟ್ ಗಳಲ್ಲಿ ಬೃಹತ್ ಗಾತ್ರದ ತ್ಯಾಜ್ಯ ಬುಟ್ಟಿಗಳನ್ನು ಇಡಲಾಗಿದ್ದು, ಪ್ರತಿ ಕಸದ ಬುಟ್ಟಿಗಳಲ್ಲಿ ನಿತ್ಯ 5-6 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತದೆ. ಜೊತೆಗೆ ಸಿಬ್ಬಂದಿ ಅರಣ್ಯದೊಳಗೆ ಹೋಗಿ ತ್ಯಾಜ್ಯ ಸಂಗ್ರಹಿಸಿ ತರುತ್ತಾರೆ. ಅದರ ಬದಲು ಪ್ರವೇಶದಲ್ಲೇ 2 ಹಂತದ ತಪಾಸಣೆ ಜಾರಿ ಮಾಡಿ ಎಂದರು.

ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಿಂಬತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.

ಮಾನವ-ವನ್ಯ ಜೀವಿ ಸಂಘರ್ಷ ಹೆಚ್ಚಾಗುತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು, ಚಿರತೆಗಳು ನಾಡಿಗೆ ಬರುತ್ತಿವೆ. ಆನೆಗಳೂ ಕಾಡಿನಿಂದ ಹೊರಬರುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯದೊಳಗೆ ನೀರು ಮತ್ತು ಆಹಾರದ ಕೊರತೆ ಆಗದಂತೆ ಯೋಜನೆ ರೂಪಿಸಿ ಎಂದು ತಿಳಿಸಿದರು.

ರಂಗನತಿಟ್ಟು ಪಕ್ಷಿಧಾಮದಲ್ಲಿ ಆನ್ ಲೈನ್ ಮೂಲಕ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಜಾರಿ ಮಾಡುವಂತೆಯೂ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

9 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago