ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಅದ್ಧೂರಿಯಾಗಿ ಜರುಗಿತು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚಿನ ಜನರು ಭಾಗಿಯಾಗಿ ಸಮಾವೇಶವನ್ನು ಯಶಸ್ವಿಗೊಳಿಸಿದರು. ಸಮಾವೇಶದಲ್ಲೇ ಬರೋಬ್ಬರಿ 2578 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ರಿಮೋಟ್ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.
ಸಿಎಂ ತವರು ಜಿಲ್ಲೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡುವ ಮೂಲಕ ವಿರೋಧಿಗಳು ಹಾಗೂ ಹೈಕಮಾಂಡ್ಗೆ ಸಂದೇಶ ರವಾನಿಸಿದರು.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ಶಾಸಕರಾದ ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಸಂಸದ ಸುನೀಲ್ ಬೋಸ್ ಸೇರಿದಂತೆ ಎಂಎಲ್ಸಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…