Mysore
26
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ

ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ ಶಾಕಾ ಹಾಗೂ ಫಲ ಸಮರ್ಪಣೆ ಮಾಡಲಾಯಿತು. ಬಳಿಕ ರಾಯರಿಗೆ ಜ್ಯೋತಿ ಬೆಳಗಿಸಿ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ರಾಘವೇಂದ್ರ ಕುಲಕರ್ಣಿ ಜಗನ್ನಾಥಾಚಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಮಠದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗಿದ್ದು, ಮಠವನ್ನು ವಿಧ ವಿಧದ ಹೂವುಗಳಿಂದ ಅಲಂಕರಿಸಲಾಗಿದೆ.

ಮೂರು ದಿನಗಳು ಕೂಡ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹಲವಾರು ಸಾರ್ವಜನಿಕರು ಭೇಟಿ ನೀಡಲಿದ್ದು, ಅವರೆಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

Tags:
error: Content is protected !!