ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ ಶಾಕಾ ಹಾಗೂ ಫಲ ಸಮರ್ಪಣೆ ಮಾಡಲಾಯಿತು. ಬಳಿಕ ರಾಯರಿಗೆ ಜ್ಯೋತಿ ಬೆಳಗಿಸಿ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ರಾಘವೇಂದ್ರ ಕುಲಕರ್ಣಿ ಜಗನ್ನಾಥಾಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಮಠದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗಿದ್ದು, ಮಠವನ್ನು ವಿಧ ವಿಧದ ಹೂವುಗಳಿಂದ ಅಲಂಕರಿಸಲಾಗಿದೆ.
ಮೂರು ದಿನಗಳು ಕೂಡ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹಲವಾರು ಸಾರ್ವಜನಿಕರು ಭೇಟಿ ನೀಡಲಿದ್ದು, ಅವರೆಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…