ಮೈಸೂರು ನಗರ

ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ

ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ ಶಾಕಾ ಹಾಗೂ ಫಲ ಸಮರ್ಪಣೆ ಮಾಡಲಾಯಿತು. ಬಳಿಕ ರಾಯರಿಗೆ ಜ್ಯೋತಿ ಬೆಳಗಿಸಿ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ರಾಘವೇಂದ್ರ ಕುಲಕರ್ಣಿ ಜಗನ್ನಾಥಾಚಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಮಠದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗಿದ್ದು, ಮಠವನ್ನು ವಿಧ ವಿಧದ ಹೂವುಗಳಿಂದ ಅಲಂಕರಿಸಲಾಗಿದೆ.

ಮೂರು ದಿನಗಳು ಕೂಡ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹಲವಾರು ಸಾರ್ವಜನಿಕರು ಭೇಟಿ ನೀಡಲಿದ್ದು, ಅವರೆಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago