ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿಯಾಗಲಿದ್ದು, ಮಹಿಳಾ ಉದ್ಯೋಗಿಗಳಿಗೆ ಅವಕಾಶ ಇರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಸೇರಿದಂತೆ 20ಕ್ಕೂ ಹೆಚ್ಚು ಇಎಸ್ಡಿಎಂ ಕಂಪನಿಗಳು ಮೈಸೂರು ಕ್ಲಸ್ಟರ್ಗೆ ಸೇರ್ಪಡೆಗೊಳ್ಳುತ್ತಿವೆ. ಇದರಿಂದ ಸುಮಾರು 600 ಕೋಟಿ ರೂಗಳ ಹೊಸ ಹೂಡಿಕೆ ಹರಿದು ಬರುತ್ತಿದೆ ಎಂದರು.
ಮೈಸೂರನ್ನು ಉದ್ಯೋಗ ಶೀಲ ನಗರವನ್ನಾಗಿ ಮಾಡಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ. ಸುಮಾರು 150 ಎಕರೆಗಳಷ್ಟು ಜಾಗದಲ್ಲಿ ಕ್ಲಸ್ಟರ್ ಸ್ಥಾಪಿಸುವ ಗುರಿ ಹೊಂದಲಾಗಿದೆ.
ಇದರಿಂದ 5000 ಹೊಸ ಉದ್ಯೋಗ ಸೃಷ್ಟಿಯಾಗಲಿದ್ದು, ಅದರಲ್ಲಿಯೂ ಮಹಿಳಾ ಉದ್ಯೋಗಿಗಳಿಗೆ ಅವಕಾಶ ಸಿಗಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಶ್ರಮ ವಹಿಸುತ್ತಿದೆ. ಹಾಗಾಗಿ ಯುವಕರು ಭಯ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಭರವಸೆ ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…