ಮೈಸೂರು: ಜೆಡಿಎಸ್ನ 9 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಐವರು ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಫೆಬ್ರವರಿಯಲ್ಲಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಇನ್ನು ನಾವು ಪಕ್ಷ ಬಿಟ್ಟು ಬರುವುದಿಲ್ಲ ಅಂತ ಹೇಳಿದವರೆಲ್ಲಾ ಈಗ ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ನಮಗೆ ಅವರ ಅವಶ್ಯಕತೆ ಇಲ್ಲ. ಆದರೆ ಅವರೇ ಈಗ ಬರುತ್ತೀವಿ ಎಂದು ದುಂಬಾಲು ಬಿದ್ದಿರುವುದರಿಂದ ನಾವು ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮೈಸೂರಿನಲ್ಲಿ ʼದಿಶಾʼ ಸಭೆ ನಡೆಸುತ್ತಿರುವುದಕ್ಕೆ ಸ್ವಾಗತಿಸಿದರು. ಈ ಸಭೆಯ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿಶಾ ಸಭೆ ಮಾಡುವುದು ಉತ್ತಮ ಕೆಲಸ ಎಂದು ಸಂತಸ ವ್ಯಕ್ತಪಡಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…