ಮೈಸೂರು: ಜೆಡಿಎಸ್ನ 9 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಐವರು ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಫೆಬ್ರವರಿಯಲ್ಲಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಇನ್ನು ನಾವು ಪಕ್ಷ ಬಿಟ್ಟು ಬರುವುದಿಲ್ಲ ಅಂತ ಹೇಳಿದವರೆಲ್ಲಾ ಈಗ ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ನಮಗೆ ಅವರ ಅವಶ್ಯಕತೆ ಇಲ್ಲ. ಆದರೆ ಅವರೇ ಈಗ ಬರುತ್ತೀವಿ ಎಂದು ದುಂಬಾಲು ಬಿದ್ದಿರುವುದರಿಂದ ನಾವು ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮೈಸೂರಿನಲ್ಲಿ ʼದಿಶಾʼ ಸಭೆ ನಡೆಸುತ್ತಿರುವುದಕ್ಕೆ ಸ್ವಾಗತಿಸಿದರು. ಈ ಸಭೆಯ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿಶಾ ಸಭೆ ಮಾಡುವುದು ಉತ್ತಮ ಕೆಲಸ ಎಂದು ಸಂತಸ ವ್ಯಕ್ತಪಡಿಸಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…