ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಈ ವಾರ ಒಂದು ರೀತಿಯಲ್ಲಿ ಹಾಸ್ಯಭರಿತ ವಾರವಾಗಿದೆ. ಕಾಂಗ್ರೆಸ್ ನಾಯಕರಾದ ಎಚ್.ಸಿ.ಮಹದೇವಪ್ಪ, ಯತೀಂದ್ರ ಹೇಳಿದ್ದನ್ನೆಲ್ಲಾ ಕಾಂಗ್ರೆಸ್ನವರು ಒಪ್ಪಿಕೊಳ್ಳುತ್ತಿದ್ದಾರೆ. ಆಡಳಿತ ಮಾಡುವವರು ಮೊದಲು ಇತಿಹಾಸವನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೇ ಅವಾಂತರಗಳು ಉಂಟಾಗುತ್ತವೆ. ಹೈದರಾಲಿ, ಟಿಪ್ಪು ಸುಲ್ತಾನ್ ಸುಮಾರು 40 ವರ್ಷಗಳ ಕಾಲ ಮಾತ್ರ ಆಳ್ವಿಕೆ ನಡೆಸಿದ್ದಾರೆ.
40 ವರ್ಷದಲ್ಲಿ ಇವರ ಹೇಳಿಕೊಳ್ಳುವಂತಹ ಸಾಧನೆ ಏನೂ ಇಲ್ಲ. ಕಾಂಗ್ರೆಸ್ನವರು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಇರಲಾಗಲ್ಲ. ಇತಿಹಾಸ ತಿರುಚುವ ಕೆಲಸವನ್ನು ಕಾಂಗ್ರೆಸ್ನವರು ಏಕೆ ಮಾಡುತ್ತಿದ್ದಾರೆ ಎಂದು ತಿಳಿಸಬೇಕು. ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಎಚ್ಚರಿಕೆ ನೀಡಿದರು.
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…