ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಈ ವಾರ ಒಂದು ರೀತಿಯಲ್ಲಿ ಹಾಸ್ಯಭರಿತ ವಾರವಾಗಿದೆ. ಕಾಂಗ್ರೆಸ್ ನಾಯಕರಾದ ಎಚ್.ಸಿ.ಮಹದೇವಪ್ಪ, ಯತೀಂದ್ರ ಹೇಳಿದ್ದನ್ನೆಲ್ಲಾ ಕಾಂಗ್ರೆಸ್ನವರು ಒಪ್ಪಿಕೊಳ್ಳುತ್ತಿದ್ದಾರೆ. ಆಡಳಿತ ಮಾಡುವವರು ಮೊದಲು ಇತಿಹಾಸವನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೇ ಅವಾಂತರಗಳು ಉಂಟಾಗುತ್ತವೆ. ಹೈದರಾಲಿ, ಟಿಪ್ಪು ಸುಲ್ತಾನ್ ಸುಮಾರು 40 ವರ್ಷಗಳ ಕಾಲ ಮಾತ್ರ ಆಳ್ವಿಕೆ ನಡೆಸಿದ್ದಾರೆ.
40 ವರ್ಷದಲ್ಲಿ ಇವರ ಹೇಳಿಕೊಳ್ಳುವಂತಹ ಸಾಧನೆ ಏನೂ ಇಲ್ಲ. ಕಾಂಗ್ರೆಸ್ನವರು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಇರಲಾಗಲ್ಲ. ಇತಿಹಾಸ ತಿರುಚುವ ಕೆಲಸವನ್ನು ಕಾಂಗ್ರೆಸ್ನವರು ಏಕೆ ಮಾಡುತ್ತಿದ್ದಾರೆ ಎಂದು ತಿಳಿಸಬೇಕು. ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…