ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ
ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.
ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…