ಮೈಸೂರು ನಗರ

ಚಿಂದಿ ಆಯುವ ಯುವಕರ ಜಗಳ : ಓರ್ವ ಕೊಲೆಯಲ್ಲಿ ಅಂತ್ಯ

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್‌ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ

ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.

ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 min ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

4 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

4 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

4 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

4 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

4 hours ago