ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ
ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.
ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…