ಮೈಸೂರು ನಗರ

ಚಿಂದಿ ಆಯುವ ಯುವಕರ ಜಗಳ : ಓರ್ವ ಕೊಲೆಯಲ್ಲಿ ಅಂತ್ಯ

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್‌ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ

ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.

ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

3 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

4 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

6 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

10 hours ago