blood donation camp
ಮೈಸೂರು: ಇಲ್ಲಿನ ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿಂದು ಭಾರತೀಯ ಸೇನೆಯನ್ನು ಬೆಂಬಲಿಸಿ ಬೃಹತ್ ರಕ್ತದಾನ ಶಿಬರವನ್ನು ಆಯೋಜನೆ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗು ತಾಣಗಳನ್ನು ಕ್ಷಿಪಣಿ ದಾಳಿ ನಡೆಸಿ ಧ್ವಂಸ ಮಾಡಿತ್ತು. ಪರಿಣಾಮ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯನ್ನು ಬೆಂಬಲಿಸಿ ಇಂದು ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಶಾಸಕ ತನ್ವೀರ್ ಸೇಠ್ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ ಧರ್ಮಾತೀತವಾಗಿ ನೂರಾರು ಜನ ಭಾಗಿಯಾಗಿ ಸ್ವಯಂ ಪ್ರೇರಿತರಾಗಿ ರಕ್ತ ಕೊಟ್ಟು ದೇಶ ಪ್ರೇಮ ಮೆರೆದರು. ದೇಶಕ್ಕೆ ರಕ್ತ ಅಲ್ಲ ಪ್ರಾಣವನ್ನೇ ಕೊಡುತ್ತೇವೆ. ದೇಶ ನಮಗೆ ಎಲ್ಲವನ್ನೂ ಕೊಟ್ಟಿದೆ. ದೇಶಕ್ಕಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೆಮ್ಮೆಯಿಂದ ಹೇಳಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…