ಮೈಸೂರು ನಗರ

ಷೇರುಪೇಟೆ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ವಂಚನೆ

ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ ಪರಿಚಯವಾಗಿದೆ. ಅವರ ಮೂಲಕ ಅವರ ತಂಗಿ ಲಾವಣ್ಯ ಎಂಬವರ ಪರಿಚಯವಾಗಿದೆ. ನಾನು ಟ್ರೇಡಿಂಗ್ ವ್ಯವಹಾರ ನಡೆಸುತ್ತಿದ್ದು, ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಹಣ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ.

ಆಕೆಯ ಮಾತನ್ನು ನಂಬಿದ ಅವರು ತಮ್ಮ ಖಾತೆ, ತಾಯಿ, ಸ್ನೇಹಿತರ ಖಾತೆಯ ಮೂಲಕ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ತೊಡಗಿಸಿದ್ದಾರೆ. ಆದರೆ, ಯಾವುದೇ ಲಾಭಾಂಶ ಬಂದಿಲ್ಲ. ಜೊತೆಗೆ ಅಸಲು ಹಣವನ್ನು ಕಳೆದುಕೊಂಡಿದ್ದರು. ಈ ಸಂಬಂಧ ಲಾವಣ್ಯ ಬಳಿ ಹಣಕ್ಕಾಗಿ ಒತ್ತಾಯಿಸಿದ ವೇಳೆ ನಾನು ಯಾವುದೇ ಹಣ ಕೊಡಬೇಕಾಗಿಲ್ಲ ಎಂದು ಬೆದರಿಸಿ ಕಳುಹಿಸಿದ್ದಾರೆ. ಈ ಸಂಬಂಧ ವ್ಯಕ್ತಿಯು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ ಪೊಲೀಸರ ಹೆಸರಿನಲ್ಲಿ ದೋಖಾ
ಮತ್ತೊಂದು ಪ್ರಕರಣದಲ್ಲಿ ನಾವು ಮುಂಬೈ ಪೊಲೀಸರು, ನೀವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದೀರಿ. ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕುವೆಂಪುನಗರ ನಿವಾಸಿಗೆ ಬೆದರಿಕೆ ಕರೆ ಬಂದಿದೆ. ನಂತರ ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ಕೆಲ ಸಮಯ ನಾವು ಹೇಳಿದ ಖಾತೆಗೆ ವರ್ಗಾಯಿಸಿ. ಪರಿಶೀಲನೆ ನಂತರ ವಾಪಸ್ ಹಾಕುತ್ತೇವೆ ಎಂದು ತಿಳಿಸಿ ಅವರ ಖಾತೆಯಲ್ಲಿದ್ದ 7.25 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

23 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

32 mins ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

37 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

55 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

6 hours ago