ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ ಪರಿಚಯವಾಗಿದೆ. ಅವರ ಮೂಲಕ ಅವರ ತಂಗಿ ಲಾವಣ್ಯ ಎಂಬವರ ಪರಿಚಯವಾಗಿದೆ. ನಾನು ಟ್ರೇಡಿಂಗ್ ವ್ಯವಹಾರ ನಡೆಸುತ್ತಿದ್ದು, ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಹಣ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ.
ಆಕೆಯ ಮಾತನ್ನು ನಂಬಿದ ಅವರು ತಮ್ಮ ಖಾತೆ, ತಾಯಿ, ಸ್ನೇಹಿತರ ಖಾತೆಯ ಮೂಲಕ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ತೊಡಗಿಸಿದ್ದಾರೆ. ಆದರೆ, ಯಾವುದೇ ಲಾಭಾಂಶ ಬಂದಿಲ್ಲ. ಜೊತೆಗೆ ಅಸಲು ಹಣವನ್ನು ಕಳೆದುಕೊಂಡಿದ್ದರು. ಈ ಸಂಬಂಧ ಲಾವಣ್ಯ ಬಳಿ ಹಣಕ್ಕಾಗಿ ಒತ್ತಾಯಿಸಿದ ವೇಳೆ ನಾನು ಯಾವುದೇ ಹಣ ಕೊಡಬೇಕಾಗಿಲ್ಲ ಎಂದು ಬೆದರಿಸಿ ಕಳುಹಿಸಿದ್ದಾರೆ. ಈ ಸಂಬಂಧ ವ್ಯಕ್ತಿಯು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಂಬೈ ಪೊಲೀಸರ ಹೆಸರಿನಲ್ಲಿ ದೋಖಾ
ಮತ್ತೊಂದು ಪ್ರಕರಣದಲ್ಲಿ ನಾವು ಮುಂಬೈ ಪೊಲೀಸರು, ನೀವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದೀರಿ. ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕುವೆಂಪುನಗರ ನಿವಾಸಿಗೆ ಬೆದರಿಕೆ ಕರೆ ಬಂದಿದೆ. ನಂತರ ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ಕೆಲ ಸಮಯ ನಾವು ಹೇಳಿದ ಖಾತೆಗೆ ವರ್ಗಾಯಿಸಿ. ಪರಿಶೀಲನೆ ನಂತರ ವಾಪಸ್ ಹಾಕುತ್ತೇವೆ ಎಂದು ತಿಳಿಸಿ ಅವರ ಖಾತೆಯಲ್ಲಿದ್ದ 7.25 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…