ಮೈಸೂರು ನಗರ

ಷೇರುಪೇಟೆ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ವಂಚನೆ

ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ ಪರಿಚಯವಾಗಿದೆ. ಅವರ ಮೂಲಕ ಅವರ ತಂಗಿ ಲಾವಣ್ಯ ಎಂಬವರ ಪರಿಚಯವಾಗಿದೆ. ನಾನು ಟ್ರೇಡಿಂಗ್ ವ್ಯವಹಾರ ನಡೆಸುತ್ತಿದ್ದು, ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಹಣ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ.

ಆಕೆಯ ಮಾತನ್ನು ನಂಬಿದ ಅವರು ತಮ್ಮ ಖಾತೆ, ತಾಯಿ, ಸ್ನೇಹಿತರ ಖಾತೆಯ ಮೂಲಕ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ತೊಡಗಿಸಿದ್ದಾರೆ. ಆದರೆ, ಯಾವುದೇ ಲಾಭಾಂಶ ಬಂದಿಲ್ಲ. ಜೊತೆಗೆ ಅಸಲು ಹಣವನ್ನು ಕಳೆದುಕೊಂಡಿದ್ದರು. ಈ ಸಂಬಂಧ ಲಾವಣ್ಯ ಬಳಿ ಹಣಕ್ಕಾಗಿ ಒತ್ತಾಯಿಸಿದ ವೇಳೆ ನಾನು ಯಾವುದೇ ಹಣ ಕೊಡಬೇಕಾಗಿಲ್ಲ ಎಂದು ಬೆದರಿಸಿ ಕಳುಹಿಸಿದ್ದಾರೆ. ಈ ಸಂಬಂಧ ವ್ಯಕ್ತಿಯು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ ಪೊಲೀಸರ ಹೆಸರಿನಲ್ಲಿ ದೋಖಾ
ಮತ್ತೊಂದು ಪ್ರಕರಣದಲ್ಲಿ ನಾವು ಮುಂಬೈ ಪೊಲೀಸರು, ನೀವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದೀರಿ. ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕುವೆಂಪುನಗರ ನಿವಾಸಿಗೆ ಬೆದರಿಕೆ ಕರೆ ಬಂದಿದೆ. ನಂತರ ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ಕೆಲ ಸಮಯ ನಾವು ಹೇಳಿದ ಖಾತೆಗೆ ವರ್ಗಾಯಿಸಿ. ಪರಿಶೀಲನೆ ನಂತರ ವಾಪಸ್ ಹಾಕುತ್ತೇವೆ ಎಂದು ತಿಳಿಸಿ ಅವರ ಖಾತೆಯಲ್ಲಿದ್ದ 7.25 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago