ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ ಪರಿಚಯವಾಗಿದೆ. ಅವರ ಮೂಲಕ ಅವರ ತಂಗಿ ಲಾವಣ್ಯ ಎಂಬವರ ಪರಿಚಯವಾಗಿದೆ. ನಾನು ಟ್ರೇಡಿಂಗ್ ವ್ಯವಹಾರ ನಡೆಸುತ್ತಿದ್ದು, ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಹಣ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ.
ಆಕೆಯ ಮಾತನ್ನು ನಂಬಿದ ಅವರು ತಮ್ಮ ಖಾತೆ, ತಾಯಿ, ಸ್ನೇಹಿತರ ಖಾತೆಯ ಮೂಲಕ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ತೊಡಗಿಸಿದ್ದಾರೆ. ಆದರೆ, ಯಾವುದೇ ಲಾಭಾಂಶ ಬಂದಿಲ್ಲ. ಜೊತೆಗೆ ಅಸಲು ಹಣವನ್ನು ಕಳೆದುಕೊಂಡಿದ್ದರು. ಈ ಸಂಬಂಧ ಲಾವಣ್ಯ ಬಳಿ ಹಣಕ್ಕಾಗಿ ಒತ್ತಾಯಿಸಿದ ವೇಳೆ ನಾನು ಯಾವುದೇ ಹಣ ಕೊಡಬೇಕಾಗಿಲ್ಲ ಎಂದು ಬೆದರಿಸಿ ಕಳುಹಿಸಿದ್ದಾರೆ. ಈ ಸಂಬಂಧ ವ್ಯಕ್ತಿಯು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಂಬೈ ಪೊಲೀಸರ ಹೆಸರಿನಲ್ಲಿ ದೋಖಾ
ಮತ್ತೊಂದು ಪ್ರಕರಣದಲ್ಲಿ ನಾವು ಮುಂಬೈ ಪೊಲೀಸರು, ನೀವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದೀರಿ. ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕುವೆಂಪುನಗರ ನಿವಾಸಿಗೆ ಬೆದರಿಕೆ ಕರೆ ಬಂದಿದೆ. ನಂತರ ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ಕೆಲ ಸಮಯ ನಾವು ಹೇಳಿದ ಖಾತೆಗೆ ವರ್ಗಾಯಿಸಿ. ಪರಿಶೀಲನೆ ನಂತರ ವಾಪಸ್ ಹಾಕುತ್ತೇವೆ ಎಂದು ತಿಳಿಸಿ ಅವರ ಖಾತೆಯಲ್ಲಿದ್ದ 7.25 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…