ಮೈಸೂರು ನಗರ

ಷೇರುಪೇಟೆ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ವಂಚನೆ

ಮೈಸೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸ್ನೇಹಿತೆಯ ತಂಗಿಯ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 30 ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ರಾಘವೇಂದ್ರ ನಗರದ ನಿವಾಸಿಯೊಬ್ಬರಿಗೆ ಶ್ರುತಿ ಎಂಬವರ ಪರಿಚಯವಾಗಿದೆ. ಅವರ ಮೂಲಕ ಅವರ ತಂಗಿ ಲಾವಣ್ಯ ಎಂಬವರ ಪರಿಚಯವಾಗಿದೆ. ನಾನು ಟ್ರೇಡಿಂಗ್ ವ್ಯವಹಾರ ನಡೆಸುತ್ತಿದ್ದು, ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಹಣ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ.

ಆಕೆಯ ಮಾತನ್ನು ನಂಬಿದ ಅವರು ತಮ್ಮ ಖಾತೆ, ತಾಯಿ, ಸ್ನೇಹಿತರ ಖಾತೆಯ ಮೂಲಕ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ತೊಡಗಿಸಿದ್ದಾರೆ. ಆದರೆ, ಯಾವುದೇ ಲಾಭಾಂಶ ಬಂದಿಲ್ಲ. ಜೊತೆಗೆ ಅಸಲು ಹಣವನ್ನು ಕಳೆದುಕೊಂಡಿದ್ದರು. ಈ ಸಂಬಂಧ ಲಾವಣ್ಯ ಬಳಿ ಹಣಕ್ಕಾಗಿ ಒತ್ತಾಯಿಸಿದ ವೇಳೆ ನಾನು ಯಾವುದೇ ಹಣ ಕೊಡಬೇಕಾಗಿಲ್ಲ ಎಂದು ಬೆದರಿಸಿ ಕಳುಹಿಸಿದ್ದಾರೆ. ಈ ಸಂಬಂಧ ವ್ಯಕ್ತಿಯು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ ಪೊಲೀಸರ ಹೆಸರಿನಲ್ಲಿ ದೋಖಾ
ಮತ್ತೊಂದು ಪ್ರಕರಣದಲ್ಲಿ ನಾವು ಮುಂಬೈ ಪೊಲೀಸರು, ನೀವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದೀರಿ. ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕುವೆಂಪುನಗರ ನಿವಾಸಿಗೆ ಬೆದರಿಕೆ ಕರೆ ಬಂದಿದೆ. ನಂತರ ನಿಮ್ಮ ಖಾತೆಯಲ್ಲಿ ಇರುವ ಹಣವನ್ನು ಕೆಲ ಸಮಯ ನಾವು ಹೇಳಿದ ಖಾತೆಗೆ ವರ್ಗಾಯಿಸಿ. ಪರಿಶೀಲನೆ ನಂತರ ವಾಪಸ್ ಹಾಕುತ್ತೇವೆ ಎಂದು ತಿಳಿಸಿ ಅವರ ಖಾತೆಯಲ್ಲಿದ್ದ 7.25 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago