ಮೈಸೂರು ನಗರ

ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್‌ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಇದನ್ನು ಓದಿ: ಇದು ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಆಕ್ರೋಶ

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago