ಮೈಸೂರು ನಗರ

ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್‌ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಇದನ್ನು ಓದಿ: ಇದು ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಆಕ್ರೋಶ

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 mins ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

9 mins ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

14 mins ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

18 mins ago

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

11 hours ago