ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
ಅಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ಮಹಾರಾಜರ ಮಾದರಿ ಪೇಟವನ್ನು ಹಾಕಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಸ್ತ್ರ ವಿನ್ಯಾಸಕ, ಕಲಾವಿದ ನಂದನ್ ಅವರ ಕೈಚಳಕದಲ್ಲಿ ಪೇಟ ಸಿದ್ಧಗೊಂಡಿದ್ದು, ಮಠದ ಭಕ್ತ ವೃಂದ ಮೈಸೂರು ಮಹಾರಾಜರ ಮಾದರಿ ಪೇಟವನ್ನು ಪ್ರಧಾನಿ ಮೋದಿಗೆ ಹಾಕಲಿದೆ.
ಐದು ದಿನಗಳ ನಿರಂತರ ಶ್ರಮದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಧರಿಸುತ್ತಿದ್ದ ಮಾದರಿ ಪೇಟ ತಯಾರಾಗಿದ್ದು, ಶುದ್ದ ಬನಾರಸ್ ಸಿಲ್ಕ್ ಬಟ್ಟೆ, ಮುತ್ತಿನ ಮಣಿಗಳು, ಗಂಡುಬೇರುಂಡ ಚಿತ್ರ ಬಳಸಿ ಅಚ್ಚುಕಟ್ಟಾಗಿ ತಯಾರಿಸಲಾಗಿದೆ.
ಈ ಹಿಂದೆ ಕಲಾವಿದ ನಂದನ್ ಅವರು ನರೇಂದ್ರ ಮೋದಿ ಅವರಿಗೆ ಕೆಂಪೇಗೌಡ ಪೇಟ ತಯಾರಿಸಿ ಕೊಟ್ಟಿದ್ದರು. ಈಗ ಅವರಿಂದಲೇ ಮೈಸೂರು ಮಹಾರಾಜರ ಪೇಟ ತಯಾರಾಗಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…