ಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ವಾಹನ ದಟ್ಟಣೆ: 5 ವರ್ಷದಲ್ಲಿ ಅಪಘಾತಕ್ಕೆ ಬಲಿಯಾದವರೆಷ್ಟು ಗೊತ್ತಾ?

ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ.

ವಾಹನ ಸಂಚಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಪೊಲೀಸರು ಅಭಿಪ್ರಾಯಪಟ್ಟಿದ್ದು, ಗುಂಡಿ ಬಿದ್ದ ರಸ್ತೆ, ಅವೈಜ್ಞಾನಿಕ ಹಂಪ್ಸ್‌ಗಳೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಮೈಸೂರು ನಗರದಲ್ಲಿ ವಿ.ವಿ.ಪುರಂ, ಕೃಷ್ಣರಾಜ, ಸಿದ್ದಾರ್ಥನಗರ, ನರಸಿಂಹರಾಜ, ಕುವೆಂಪುನಗರ, ದೇವರಾಜ ಸಂಚಾರಿ ಠಾಣೆಗಳಿದ್ದು, ದೇವರಾಜ ಹೊರತುಪಡಿಸಿ ಉಳಿದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್‌ಗಳಿವೆ. ಇದೇ ಅಪಘಾತಕ್ಕೆ ಆಹ್ವಾನ ನೀಡುವಂತಿದೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬ್ಲಾಕ್ ಸ್ಪಾಟ್ ಇರುವ ಕಡೆ ನಾಮಫಲಕ ಹಾಕಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

ಇನ್ನು ಕಳೆದ 2020ರಲ್ಲಿ 633 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 623 ಮಂದಿಗೆ ಗಾಯಗಳಾಗಿದ್ದು, 122 ಮಂದಿ ಸಾವನ್ನಪ್ಪಿದ್ದಾರೆ. 2021ರಲ್ಲಿ 651 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 672 ಮಂದಿಗೆ ಗಾಯಗಳಾಗಿದ್ದು, 121 ಮಂದಿ ಸಾವನ್ನಪ್ಪಿದ್ದಾರೆ. 2022ರಲ್ಲಿ 776 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 775 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 953 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 992 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2024ರಲ್ಲಿ 1021 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 1041 ಮಂದಿಗೆ ಗಾಯಗಳಾಗಿದ್ದು, 148 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು 2025ರ ಜನವರಿಯಿಂದ ಜೂನ್ ತನಕ 474 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 503 ಮಂದಿಗೆ ಗಾಯಗಳಾಗಿದ್ದು, 71 ಮಂದಿ ಸಾವನ್ನಪ್ಪಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

13 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

47 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

54 mins ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago