ಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ವಾಹನ ದಟ್ಟಣೆ: 5 ವರ್ಷದಲ್ಲಿ ಅಪಘಾತಕ್ಕೆ ಬಲಿಯಾದವರೆಷ್ಟು ಗೊತ್ತಾ?

ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ.

ವಾಹನ ಸಂಚಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಪೊಲೀಸರು ಅಭಿಪ್ರಾಯಪಟ್ಟಿದ್ದು, ಗುಂಡಿ ಬಿದ್ದ ರಸ್ತೆ, ಅವೈಜ್ಞಾನಿಕ ಹಂಪ್ಸ್‌ಗಳೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಮೈಸೂರು ನಗರದಲ್ಲಿ ವಿ.ವಿ.ಪುರಂ, ಕೃಷ್ಣರಾಜ, ಸಿದ್ದಾರ್ಥನಗರ, ನರಸಿಂಹರಾಜ, ಕುವೆಂಪುನಗರ, ದೇವರಾಜ ಸಂಚಾರಿ ಠಾಣೆಗಳಿದ್ದು, ದೇವರಾಜ ಹೊರತುಪಡಿಸಿ ಉಳಿದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್‌ಗಳಿವೆ. ಇದೇ ಅಪಘಾತಕ್ಕೆ ಆಹ್ವಾನ ನೀಡುವಂತಿದೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬ್ಲಾಕ್ ಸ್ಪಾಟ್ ಇರುವ ಕಡೆ ನಾಮಫಲಕ ಹಾಕಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

ಇನ್ನು ಕಳೆದ 2020ರಲ್ಲಿ 633 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 623 ಮಂದಿಗೆ ಗಾಯಗಳಾಗಿದ್ದು, 122 ಮಂದಿ ಸಾವನ್ನಪ್ಪಿದ್ದಾರೆ. 2021ರಲ್ಲಿ 651 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 672 ಮಂದಿಗೆ ಗಾಯಗಳಾಗಿದ್ದು, 121 ಮಂದಿ ಸಾವನ್ನಪ್ಪಿದ್ದಾರೆ. 2022ರಲ್ಲಿ 776 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 775 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 953 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 992 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2024ರಲ್ಲಿ 1021 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 1041 ಮಂದಿಗೆ ಗಾಯಗಳಾಗಿದ್ದು, 148 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು 2025ರ ಜನವರಿಯಿಂದ ಜೂನ್ ತನಕ 474 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 503 ಮಂದಿಗೆ ಗಾಯಗಳಾಗಿದ್ದು, 71 ಮಂದಿ ಸಾವನ್ನಪ್ಪಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

12 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

12 hours ago