Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್‌ ಷರೀಫ್‌ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 30 ಕೆಜಿ ಶ್ರೀಗಂಧವನ್ನು ವಶಕ್ಕೆ ಪಡೆದುಕೊಂಡಿದ್ದು, ಎನ್.ಆರ್.ಪಿ.ಎಸ್ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

Tags:
error: Content is protected !!