ಮೈಸೂರು ನಗರ

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಮೈಸೂರು ತಾಲ್ಲೂಕಿನ ಮಂಡಕಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಲಯನ್ಸ್ ಸಂಸ್ಥೆಯವರು ಕಟ್ಟಿಸಿಕೊಡುತ್ತಿರುವ ಶೌಚಾಲಯ, ಕಾಂಪೌಂಡ್,ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಲೆಗಳ ಸುತ್ತಮುತ್ತಲ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿಸಬೇಕು. ಅದಕ್ಕೆ ತಕ್ಕಂತೆ ಸ್ಕೆಚ್, ಖಾತೆ ಮಾಡಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸೇರಿ ಆಯಾಯ ಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ಕುಳಿತು ಬೇಗನೆ ಕೆಲಸ ಮುಗಿಸಬೇಕು ಎಂದು ಹೇಳಿದರು.

ಬಡವರು, ಶ್ರೀಮಂತರ ಮಕ್ಕಳು ಎಂಬುದನ್ನು ನೋಡದೆ ಎಲ್ಲರನ್ನೂ ಸಮಾನವಾಗಿ ಕಾಣುವ ಶಿಕ್ಷಕರು ಜ್ಞಾನಿಗಳು, ಸಮಾಜದ ಆಗು-ಹೋಗುಗಳು ಸೇರಿದಂತೆ ಎಲ್ಲವನ್ನು ತಿಳಿದುಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಸಿಕ್ಕ ಅವಧಿಯಲ್ಲಿ ಸರ್ಕಾರಿ ಪದವಿ ಪೂರ್ವ,ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಗಮನಹರಿಸಿದ್ದೆ. ೩೯೩ ಪ್ರಾಂಶುಪಾಲರನ್ನು ನೇಮಕ ಮಾಡುವ ಜತೆಗೆ ಕಟ್ಟಡ, ಶೌಚಾಲಯ, ಗ್ರಂಥಾಲಯ,ಆಡಿಟೋರಿಯಂಗಳನ್ನು ನಿರ್ಮಾಣ ಮಾಡಿದ್ದೇವು. ರಾಜ್ಯದ ಬಹುತೇಕ ಕಾಲೇಜುಗಳು ಸುಸಜ್ಜಿತ ಕಟ್ಟಡಗಳನ್ನು ಹೊಂದುವಂತೆ ಮಾಡಿದ್ದೇನೆ ಎಂದರು.

ಗ್ರಾಮಸ್ಥರು ನಮ್ಮೂರಿನ ಶಾಲೆಗಳ ಅಭಿವೃದ್ಧಿ ಬಗ್ಗೆ ಯೋಚಿಸಬೇಕು. ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಬೇಕು. ಜಿಪಂ ಸದಸ್ಯರಾಗಿ ಆಯ್ಕೆಯಾದ ದಿನದಿಂದ ಇಲ್ಲಿಯವರೆಗೂ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿದ್ದೇನೆ. ಯಾವುದೇ ಊರಾಗಲೀ,ಯಾವುದೇ ವಿಚಾರವಾಗಲೀ ನಾನು ರಾಜಕೀಯ ಮಾಡಲ್ಲ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಬೇರೆಯವರು ರಾಜಕಾರಣ ಮಾಡುತ್ತಾರೆ. ಆದರೆ,ನಾನು ಅದಕ್ಕೆ ತಲೆಹಾಕಲ್ಲ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಬರೀ ಬಡವರ ಮಕ್ಕಳು ಮಾತ್ರ ಓದುತ್ತಾರೆ. ಹಣವುಳ್ಳವರು ದೊಡ್ಡ ದೊಡ್ಡ ಕಾನ್ವೆಂಟ್‌ಗಳಲ್ಲಿ ಓದಿಸುತ್ತಾರೆ.ಶಿಕ್ಷಕರು ಮಕ್ಕಳನ್ನು ಮತ್ತು ಶಾಲೆಯನ್ನು ತಮ್ಮ ಮಕ್ಕಳೆಂದು ಕಾಣಬೇಕು. ಮುಖ್ಯೋಪಾಧ್ಯಾಯರು ತಾಯಿಯ ಸಮಾನದಲ್ಲಿ ನಿಂತು ಸಹ ಶಿಕ್ಷಕರನ್ನು ಮಕ್ಕಳಂತೆ ಕಂಡುಒಟ್ಟಿಗೆ ಹೋಗಬೇಕು. ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲೆ ನಿಂತಿರುವುದನ್ನು ನಾವು ಗಮನಿಸಬೇಕಾಗಿದೆ ಎಂದರು.

ಜನರ ಸೇವೆ ಮಾಡಲು ನನಗೊಂದು ಅವಕಾಶ ನೀಡಿರುವಂತೆ ಮಕ್ಕಳ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ದೈವ ಪೂಜೆ ಎನ್ನುವಂತೆ ಮಕ್ಕಳನ್ನು ನೋಡಿಕೊಳ್ಳಬೇಕು. ಕ್ಷೇತ್ರದಲ್ಲಿರುವ ಶಾಲೆಗಳ ಅಭಿವೃದ್ಧಿಗೆ ಮೊದಲಿನಿಂದಲೂ ಗಮನಹರಿಸುತ್ತಾ ಬಂದಿದ್ದೇನೆ. ಮಕ್ಕಳ ಕ್ರೀಡಾಂಗಣ,ಆಟದ ಮೈದಾನ,ಶೌಚಾಲಯಗಳು,ಕುಡಿಯುವ ನೀರಿನ ಘಟಕವನ್ನು ಒದಗಿಸಲಾಗುತ್ತಿದೆ. ಈಗ ಶಾಲೆಗಳ ಜಾಗವನ್ನು ರಕ್ಷಣೆ ಮಾಡುವ ಕಡೆಗೆ ಗಮನಹರಿಸಲಾಗಿದೆ ಎಂದು ಭರವಸೆ ನೀಡಿದರು.

ಲಯನ್ ಸಂಸ್ಥೆಯವರು ಸ್ವಯಂಪ್ರೇರಣೆಯಿಂದ ಮಂಡಕಳ್ಳಿ ಶಾಲೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿ ಆಯ್ಕೆ ಮಾಡಿಕೊಂಡಿರುವುದು ಸಂತೋಷದ ವಿಚಾರವಾಗಿದೆ. ಕಾಂಪೌಂಡ್,ಕುಡಿಯುವ ನೀರಿನ ಘಟಕ, ಶೌಚಾಲಯದ ಕಟ್ಟಡದ ಜತೆಗೆ ಮಕ್ಕಳ ಆಟೋಟಕ್ಕೆ ಬೇಕಾದ ಉಪಕರಣಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳಿಗೂ ಅನುಕೂಲವಾಗಲಿದೆ. ಶಿಕ್ಷಕರು ಮರಗಿಡಗಳನ್ನು ನೆಟ್ಟು ಸುಂದರ ವಾತಾವರಣ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

ಗ್ರಾಮದ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೇಗೇರಿಸಲು ಬೇಕಾದ ಕ್ರಮವನ್ನು ಕೈಗೊಳ್ಳಲಾಗುವುದು. ಶಾಲೆಯು ಮಾದರಿಯಾಗಿ ರೂಪುಗೊಂಡರೆ ಆಯ್ಕೆ ಮಾಡಬಹುದು ಎಂದರು. ಡಿಡಿಪಿಐ ಜವರೇಗೌಡ, ಮುಖಂಡರಾದ ಲೋಕೇಶ್, ಬೀರೇಗೌಡ,ರಾಮೇಗೌಡ,ಚಂದ್ರಶೇಖರ್, ಲಯನ್ಸ್ ಸಂಸ್ಥೆಯ ಮಮತಾ, ಸುಬ್ರಹ್ಮಣ್ಯ, ಮೂರ್ತಿ,ಜಯಕುಮಾರ್,ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಮೈಸೂರು ತಾಲ್ಲೂಕಿನ ಮಂಡಕಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಲಯನ್ಸ್ ಸಂಸ್ಥೆಯವರು ಕಟ್ಟಿಸಿಕೊಡುತ್ತಿರುವ ಶೌಚಾಲಯ,ಕಾಂಪೌಂಡ್,ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಾಸಕ ಜಿ.ಟಿ.ದೇವೇಗೌಡ ಶಂಕುಸ್ಥಾಪನೆ ನೆರವೇರಿಸಿದರು.ಡಿಡಿಪಿಐ ಜವರೇಗೌಡ, ಮುಖಂಡರಾದ ಲೋಕೇಶ್, ಬೀರೇಗೌಡ,ರಾಮೇಗೌಡ,ಚಂದ್ರಶೇಖರ್, ಲಯನ್ಸ್ ಸಂಸ್ಥೆಯ ಮಮತಾ, ಸುಬ್ರಹ್ಮಣ್ಯ, ಮೂರ್ತಿ,ಜಯಕುಮಾರ್,ಶ್ರೀನಿವಾಸ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago