ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಯ ಆಶೀರ್ವಾದ ದರ್ಶನ ಪಡೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಬಳಿಕ ದರ್ಶನ್ ಮೈಸೂರಿಗೆ ಹೋಗಲು ಕೂಡ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು, ಮೈಸೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಸಂಕ್ರಾಂತಿ ಮುಗಿದ ಹಿನ್ನೆಲೆಯಲ್ಲಿ ನಟ ದರ್ಶನ್ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಸುಸೂತ್ರವಾಗಿ ಆಪರೇಷನ್ ಆಗಲಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಬೆಂಬಲಿಗರೊಂದಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…