ಮೈಸೂರು ನಗರ

ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿವೆ: ಕಮಲ್‌ ಹಾಸನ್‌ ಹೇಳಿಕೆ ಸಮರ್ಥಿಸಿಕೊಂಡ ನಟ ಕಿಶೋರ್‌

ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್‌ ಅವರು ಕಮಲ್‌ ಹಾಸನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ನಟ ಕಿಶೋರ್‌ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಎಂದುಕೊಂಡು ಅದಕ್ಕೆ ಮರು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ.
ಹಾಗಂತ ಭಾಷೆಗೆ ಮೇಲೂ-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ. ಹಾಗೆ ತಮಿಳು ಸಹ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದರು.

ಇನ್ನು ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ಕೆಲವರು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಬೇಕು. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಎಂದು ಮತ್ತೊಮ್ಮೆ ಕೇಳಿ ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ(ಸಿದ್ಧಾಂತ) ಇರಬಹುದು. ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಮಲ್‌ ಹಾಸನ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

14 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

14 hours ago