actor kishor
ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್ ಅವರು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ನಟ ಕಿಶೋರ್ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.
ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಎಂದುಕೊಂಡು ಅದಕ್ಕೆ ಮರು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ.
ಹಾಗಂತ ಭಾಷೆಗೆ ಮೇಲೂ-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ. ಹಾಗೆ ತಮಿಳು ಸಹ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದರು.
ಇನ್ನು ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ಕೆಲವರು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಬೇಕು. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಎಂದು ಮತ್ತೊಮ್ಮೆ ಕೇಳಿ ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ(ಸಿದ್ಧಾಂತ) ಇರಬಹುದು. ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಮಲ್ ಹಾಸನ್ ಹೇಳಿಕೆಯನ್ನ ಸಮರ್ಥಿಸಿಕೊಂಡರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…