ಮೈಸೂರು ನಗರ

ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿವೆ: ಕಮಲ್‌ ಹಾಸನ್‌ ಹೇಳಿಕೆ ಸಮರ್ಥಿಸಿಕೊಂಡ ನಟ ಕಿಶೋರ್‌

ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್‌ ಅವರು ಕಮಲ್‌ ಹಾಸನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ನಟ ಕಿಶೋರ್‌ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಎಂದುಕೊಂಡು ಅದಕ್ಕೆ ಮರು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ.
ಹಾಗಂತ ಭಾಷೆಗೆ ಮೇಲೂ-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ. ಹಾಗೆ ತಮಿಳು ಸಹ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದರು.

ಇನ್ನು ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ಕೆಲವರು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಬೇಕು. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಎಂದು ಮತ್ತೊಮ್ಮೆ ಕೇಳಿ ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ(ಸಿದ್ಧಾಂತ) ಇರಬಹುದು. ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಮಲ್‌ ಹಾಸನ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago