Mysore
20
scattered clouds

Social Media

ಸೋಮವಾರ, 26 ಜನವರಿ 2026
Light
Dark

ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ: ನಟ ಕಿಶೋರ್‌ ಆರೋಪ

kishor

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. ದೇಶದಲ್ಲಿ ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಜಾತಿ, ಧರ್ಮ, ಭಾಷೆ ಬಗ್ಗೆ ಅಂಧಾಭಿಮಾನ ಎಲ್ಲಿ ತನಕ ಇರುತ್ತದೋ ಅಲ್ಲಿಯ ತನಕ ಬಳಸಿಕೊಳ್ಳೋರು ಇರುತ್ತಾರೆ. ಎಲ್ಲರೂ ನಿಜವಾದ ಸಮಸ್ಯೆ ಬಗೆಹರಿಸಿಕೊಳ್ಳುವ ಕಡೆ ನೋಡಬೇಕು ಎಂದು ಸಲಹೆ ನೀಡಿದರು.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಘಟನೆ ಬಗ್ಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ರಾಜಕೀಯ ಲಾಭಕ್ಕಾಗಿ ನಾವು ಬಿಟ್ಟು ಕೊಡಬಾರದು. ಈ ಹಿಂದಿನ ಘಟನೆಗಳ ಬಗ್ಗೆ ಸತ್ಯಾ-ಸತ್ಯತೆಗಳು ಹೊರ ಬಂದಿಲ್ಲ. ಅಲ್ಲಿನ ಗವರ್ನರ್ ಸತ್ಯಪಾಲ್ ಮಲ್ಲಿಕ್ ಅವರ ಆರೋಪಗಳು ಚರ್ಚೆಯಾಗಬೇಕು. ಅವರ ಆರೋಪಗಳ ಬಗ್ಗೆ ತನಿಖೆಯಾಗಿಲ್ಲ. ಧ್ವನಿ ಎತ್ತಿದರು ಅದನ್ನು ಅಡಗಿಸುತ್ತಾರೆ. ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದಿದೆ. ಮಾಧ್ಯಮಗಳ ಹುಟ್ಟಡಗಿಸುವ ಕೆಲಸವಾಗಿದೆ. ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಪ್ರಶ್ನೆ ಕೇಳೋದು ಪ್ರಜಾಪ್ರಭುತ್ವದ ಲಕ್ಷಣ. ಉತ್ತರವನ್ನು ಬಡಿದು ಕೇಳಬೇಕು. ನಾವು ಜಾತಿ ಧರ್ಮದಲ್ಲಿ ಅಂಧರಾಗಿ ಕುಳಿತಿದ್ದೇವೆ. ದೇಶದ ವಿಚಾರದಲ್ಲೂ ಅಂಧರಾಗಬಾರದು. ಜನ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುವವರೆಗೂ ಬಿಡಬಾರದು. ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ಎಷ್ಟು ಸಾಧ್ಯವೋ ಅಷ್ಟು ರಾಜಕೀಯ ಲಾಭ ಪಡೆದಿದ್ದಾರೆ ಎಂದು ಆರೋಪಿಸಿದರು.

Tags:
error: Content is protected !!