ಮೈಸೂರು ನಗರ

ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ: ನಟ ಕಿಶೋರ್‌ ಆರೋಪ

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. ದೇಶದಲ್ಲಿ ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಜಾತಿ, ಧರ್ಮ, ಭಾಷೆ ಬಗ್ಗೆ ಅಂಧಾಭಿಮಾನ ಎಲ್ಲಿ ತನಕ ಇರುತ್ತದೋ ಅಲ್ಲಿಯ ತನಕ ಬಳಸಿಕೊಳ್ಳೋರು ಇರುತ್ತಾರೆ. ಎಲ್ಲರೂ ನಿಜವಾದ ಸಮಸ್ಯೆ ಬಗೆಹರಿಸಿಕೊಳ್ಳುವ ಕಡೆ ನೋಡಬೇಕು ಎಂದು ಸಲಹೆ ನೀಡಿದರು.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಘಟನೆ ಬಗ್ಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ರಾಜಕೀಯ ಲಾಭಕ್ಕಾಗಿ ನಾವು ಬಿಟ್ಟು ಕೊಡಬಾರದು. ಈ ಹಿಂದಿನ ಘಟನೆಗಳ ಬಗ್ಗೆ ಸತ್ಯಾ-ಸತ್ಯತೆಗಳು ಹೊರ ಬಂದಿಲ್ಲ. ಅಲ್ಲಿನ ಗವರ್ನರ್ ಸತ್ಯಪಾಲ್ ಮಲ್ಲಿಕ್ ಅವರ ಆರೋಪಗಳು ಚರ್ಚೆಯಾಗಬೇಕು. ಅವರ ಆರೋಪಗಳ ಬಗ್ಗೆ ತನಿಖೆಯಾಗಿಲ್ಲ. ಧ್ವನಿ ಎತ್ತಿದರು ಅದನ್ನು ಅಡಗಿಸುತ್ತಾರೆ. ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದಿದೆ. ಮಾಧ್ಯಮಗಳ ಹುಟ್ಟಡಗಿಸುವ ಕೆಲಸವಾಗಿದೆ. ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಪ್ರಶ್ನೆ ಕೇಳೋದು ಪ್ರಜಾಪ್ರಭುತ್ವದ ಲಕ್ಷಣ. ಉತ್ತರವನ್ನು ಬಡಿದು ಕೇಳಬೇಕು. ನಾವು ಜಾತಿ ಧರ್ಮದಲ್ಲಿ ಅಂಧರಾಗಿ ಕುಳಿತಿದ್ದೇವೆ. ದೇಶದ ವಿಚಾರದಲ್ಲೂ ಅಂಧರಾಗಬಾರದು. ಜನ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುವವರೆಗೂ ಬಿಡಬಾರದು. ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ಎಷ್ಟು ಸಾಧ್ಯವೋ ಅಷ್ಟು ರಾಜಕೀಯ ಲಾಭ ಪಡೆದಿದ್ದಾರೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

1 hour ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

2 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

2 hours ago