ಮೈಸೂರು ನಗರ

ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ: ನಟ ಕಿಶೋರ್‌ ಆರೋಪ

ಮೈಸೂರು: ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದೇ ಹೆಚ್ಚು ಎಂದು ಬಹುಭಾಷಾ ನಟ ಕಿಶೋರ್‌ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದದ್ದು ಹೆಚ್ಚು. ದೇಶದಲ್ಲಿ ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಜಾತಿ, ಧರ್ಮ, ಭಾಷೆ ಬಗ್ಗೆ ಅಂಧಾಭಿಮಾನ ಎಲ್ಲಿ ತನಕ ಇರುತ್ತದೋ ಅಲ್ಲಿಯ ತನಕ ಬಳಸಿಕೊಳ್ಳೋರು ಇರುತ್ತಾರೆ. ಎಲ್ಲರೂ ನಿಜವಾದ ಸಮಸ್ಯೆ ಬಗೆಹರಿಸಿಕೊಳ್ಳುವ ಕಡೆ ನೋಡಬೇಕು ಎಂದು ಸಲಹೆ ನೀಡಿದರು.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಘಟನೆ ಬಗ್ಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ರಾಜಕೀಯ ಲಾಭಕ್ಕಾಗಿ ನಾವು ಬಿಟ್ಟು ಕೊಡಬಾರದು. ಈ ಹಿಂದಿನ ಘಟನೆಗಳ ಬಗ್ಗೆ ಸತ್ಯಾ-ಸತ್ಯತೆಗಳು ಹೊರ ಬಂದಿಲ್ಲ. ಅಲ್ಲಿನ ಗವರ್ನರ್ ಸತ್ಯಪಾಲ್ ಮಲ್ಲಿಕ್ ಅವರ ಆರೋಪಗಳು ಚರ್ಚೆಯಾಗಬೇಕು. ಅವರ ಆರೋಪಗಳ ಬಗ್ಗೆ ತನಿಖೆಯಾಗಿಲ್ಲ. ಧ್ವನಿ ಎತ್ತಿದರು ಅದನ್ನು ಅಡಗಿಸುತ್ತಾರೆ. ಆಪರೇಷನ್ ಸಿಂಧೂರ ದೇಶದ ಹೊರಗೆ ನಡೆದಿರುವುದಕ್ಕಿಂತ ದೇಶದೊಳಗೆ ನಡೆದಿದೆ. ಮಾಧ್ಯಮಗಳ ಹುಟ್ಟಡಗಿಸುವ ಕೆಲಸವಾಗಿದೆ. ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ವೀಕ್ ಆಗುತ್ತಿದೆ. ಪ್ರಶ್ನೆ ಕೇಳೋದು ಪ್ರಜಾಪ್ರಭುತ್ವದ ಲಕ್ಷಣ. ಉತ್ತರವನ್ನು ಬಡಿದು ಕೇಳಬೇಕು. ನಾವು ಜಾತಿ ಧರ್ಮದಲ್ಲಿ ಅಂಧರಾಗಿ ಕುಳಿತಿದ್ದೇವೆ. ದೇಶದ ವಿಚಾರದಲ್ಲೂ ಅಂಧರಾಗಬಾರದು. ಜನ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುವವರೆಗೂ ಬಿಡಬಾರದು. ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕಿಕೊಂಡು ಎಷ್ಟು ಸಾಧ್ಯವೋ ಅಷ್ಟು ರಾಜಕೀಯ ಲಾಭ ಪಡೆದಿದ್ದಾರೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

12 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

13 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

14 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

14 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

15 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

16 hours ago