Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ಇದೇ ಮಾರ್ಚ್.‌7ರಂದು ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಅವರು ಗೆಳೆಯರೊಂದಿಗೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದರು.

Tags: