ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ.
ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ ರಾತ್ರೋರಾತ್ರಿ ದೊಡ್ಡದೊಡ್ಡ ಫ್ಲೆಕ್ಸ್ಗಳು ತಲೆ ಎತ್ತಿ ನಿಂತಿವೆ. ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ ಎನ್ನುವ ಶೀರ್ಷಿಕೆಯಡಿಯಲ್ಲಿ ನಗರದ ಮೆಟ್ರೋಪಾಲ್ ವೃತ್ತದಲ್ಲಿ ಜಾಹೀರಾತು ಹಾಕಲಾಗಿದೆ. 2023ರ ಫ್ರಬ್ರವರಿ ತಿಂಗಳಲ್ಲಿ ಬಿಜೆಪಿ ಜೆಡಿಎಸ್ ವಿರುದ್ಧ ನೀಡಿದ್ದ ಪ್ರಕಟಣೆ ಎಂದು ಫ್ಲೆಕ್ಸ್ನಲ್ಲಿ ಹಾಕಲಾಗಿದೆ.
ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ, ಮೆಟ್ರೋಪಾಲ್, ರಾಮಸ್ವಾಮಿ ಸರ್ಕಲ್ ಹಾಗೂ ಜೆಎಲ್ಬಿ ರಸ್ತೆ ಸೇರಿದಂತೆ ವಿವಿಧೆಡೆ ಫ್ಲೆಕ್ಸ್ಗಳನ್ನು ಹಾಕಲಾಗಿದೆ. ಈ ಹಿಂದೆ ಬಿಜೆಪಿಯು ಜೆಡಿಎಸ್ನ ದೊಡ್ಡಗೌಡರ ಕುಟುಂಬದ ವಿರುದ್ಧ ನೀಡಿದ್ದ ಭೂಕಬಳಿಕೆ ಜಾಹೀರಾತನ್ನು ಕಾಂಗ್ರೆಸ್ ಫ್ಲೆಕ್ಸ್ ಮಾಡಿಸಿ ಪ್ರಕಟಿಸಿದೆ. ಹೀಗಾಗಿ, ಮೈತ್ರಿ ಪಕ್ಷಗಳು ಭಾರೀ ಮುಜುಗರವನ್ನು ಎದುರಿಸುವಂತಾಗಿದೆ.
ಇನ್ನು ಈ ಜಾಹೀರಾತನ್ನು ತೆರವುಗೊಳಿಸಬೇಕು ಎಂದು ಜೆಡಿಎಸ್ನ ಮಾಜಿ ಶಾಸಕ ಸಾ.ರಾ ಮಹೇಶ್ ಹಾಗೂ ಮುಖಂಡರು ಪ್ರತಿಭಟನೆ ಮಾಡಿದರು.
ಈ ವೇಳೆ ಪೊಲೀಸರು ಹಾಗೂ ಜೆಡಿಎಸ್ನ ಮುಖಂಡರ ನಡುವೆ ವಾಗ್ವಾದ ನಡೆದು, ಕೊನೆಗೆ ಪೊಲೀಸರು ಸಾ.ರಾ ಮಹೇಶ್ ಸೇರಿದಂತೆ ಮುಖಂಡರನ್ನು ವಶಕ್ಕೆ ಪಡೆದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…