ಮೈಸೂರು ನಗರ

ಮೈಸೂರಲ್ಲಿ ಜಾಹೀರಾತು ಜಟಾಪಟಿ..!

ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್‌ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ‌ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ.

ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ ರಾತ್ರೋರಾತ್ರಿ ದೊಡ್ಡದೊಡ್ಡ ಫ್ಲೆಕ್ಸ್‌ಗಳು ತಲೆ ಎತ್ತಿ ನಿಂತಿವೆ. ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ ಎನ್ನುವ ಶೀರ್ಷಿಕೆಯಡಿಯಲ್ಲಿ ನಗರದ ಮೆಟ್ರೋಪಾಲ್‌ ವೃತ್ತದಲ್ಲಿ ಜಾಹೀರಾತು ಹಾಕಲಾಗಿದೆ. 2023ರ ಫ್ರಬ್ರವರಿ ತಿಂಗಳಲ್ಲಿ ಬಿಜೆಪಿ ಜೆಡಿಎಸ್‌ ವಿರುದ್ಧ ನೀಡಿದ್ದ ಪ್ರಕಟಣೆ ಎಂದು ಫ್ಲೆಕ್ಸ್‌ನಲ್ಲಿ ಹಾಕಲಾಗಿದೆ.

ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ, ಮೆಟ್ರೋಪಾಲ್‌, ರಾಮಸ್ವಾಮಿ ಸರ್ಕಲ್‌ ಹಾಗೂ ಜೆಎಲ್‌ಬಿ ರಸ್ತೆ ಸೇರಿದಂತೆ ವಿವಿಧೆಡೆ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಈ ಹಿಂದೆ ಬಿಜೆಪಿಯು ಜೆಡಿಎಸ್‌ನ ದೊಡ್ಡಗೌಡರ ಕುಟುಂಬದ ವಿರುದ್ಧ ನೀಡಿದ್ದ ಭೂಕಬಳಿಕೆ ಜಾಹೀರಾತನ್ನು ಕಾಂಗ್ರೆಸ್‌ ಫ್ಲೆಕ್ಸ್‌ ಮಾಡಿಸಿ ಪ್ರಕಟಿಸಿದೆ. ಹೀಗಾಗಿ, ಮೈತ್ರಿ ಪಕ್ಷಗಳು ಭಾರೀ ಮುಜುಗರವನ್ನು ಎದುರಿಸುವಂತಾಗಿದೆ.

ಇನ್ನು ಈ ಜಾಹೀರಾತನ್ನು ತೆರವುಗೊಳಿಸಬೇಕು ಎಂದು ಜೆಡಿಎಸ್‌ನ ಮಾಜಿ ಶಾಸಕ ಸಾ.ರಾ ಮಹೇಶ್‌ ಹಾಗೂ ಮುಖಂಡರು ಪ್ರತಿಭಟನೆ ಮಾಡಿದರು.

ಈ ವೇಳೆ ಪೊಲೀಸರು ಹಾಗೂ ಜೆಡಿಎಸ್‌ನ ಮುಖಂಡರ ನಡುವೆ ವಾಗ್ವಾದ ನಡೆದು, ಕೊನೆಗೆ ಪೊಲೀಸರು ಸಾ.ರಾ ಮಹೇಶ್‌ ಸೇರಿದಂತೆ ಮುಖಂಡರನ್ನು ವಶಕ್ಕೆ ಪಡೆದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

11 mins ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

19 mins ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

53 mins ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

3 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

4 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

4 hours ago