ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ.
ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ ರಾತ್ರೋರಾತ್ರಿ ದೊಡ್ಡದೊಡ್ಡ ಫ್ಲೆಕ್ಸ್ಗಳು ತಲೆ ಎತ್ತಿ ನಿಂತಿವೆ. ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ ಎನ್ನುವ ಶೀರ್ಷಿಕೆಯಡಿಯಲ್ಲಿ ನಗರದ ಮೆಟ್ರೋಪಾಲ್ ವೃತ್ತದಲ್ಲಿ ಜಾಹೀರಾತು ಹಾಕಲಾಗಿದೆ. 2023ರ ಫ್ರಬ್ರವರಿ ತಿಂಗಳಲ್ಲಿ ಬಿಜೆಪಿ ಜೆಡಿಎಸ್ ವಿರುದ್ಧ ನೀಡಿದ್ದ ಪ್ರಕಟಣೆ ಎಂದು ಫ್ಲೆಕ್ಸ್ನಲ್ಲಿ ಹಾಕಲಾಗಿದೆ.
ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ, ಮೆಟ್ರೋಪಾಲ್, ರಾಮಸ್ವಾಮಿ ಸರ್ಕಲ್ ಹಾಗೂ ಜೆಎಲ್ಬಿ ರಸ್ತೆ ಸೇರಿದಂತೆ ವಿವಿಧೆಡೆ ಫ್ಲೆಕ್ಸ್ಗಳನ್ನು ಹಾಕಲಾಗಿದೆ. ಈ ಹಿಂದೆ ಬಿಜೆಪಿಯು ಜೆಡಿಎಸ್ನ ದೊಡ್ಡಗೌಡರ ಕುಟುಂಬದ ವಿರುದ್ಧ ನೀಡಿದ್ದ ಭೂಕಬಳಿಕೆ ಜಾಹೀರಾತನ್ನು ಕಾಂಗ್ರೆಸ್ ಫ್ಲೆಕ್ಸ್ ಮಾಡಿಸಿ ಪ್ರಕಟಿಸಿದೆ. ಹೀಗಾಗಿ, ಮೈತ್ರಿ ಪಕ್ಷಗಳು ಭಾರೀ ಮುಜುಗರವನ್ನು ಎದುರಿಸುವಂತಾಗಿದೆ.
ಇನ್ನು ಈ ಜಾಹೀರಾತನ್ನು ತೆರವುಗೊಳಿಸಬೇಕು ಎಂದು ಜೆಡಿಎಸ್ನ ಮಾಜಿ ಶಾಸಕ ಸಾ.ರಾ ಮಹೇಶ್ ಹಾಗೂ ಮುಖಂಡರು ಪ್ರತಿಭಟನೆ ಮಾಡಿದರು.
ಈ ವೇಳೆ ಪೊಲೀಸರು ಹಾಗೂ ಜೆಡಿಎಸ್ನ ಮುಖಂಡರ ನಡುವೆ ವಾಗ್ವಾದ ನಡೆದು, ಕೊನೆಗೆ ಪೊಲೀಸರು ಸಾ.ರಾ ಮಹೇಶ್ ಸೇರಿದಂತೆ ಮುಖಂಡರನ್ನು ವಶಕ್ಕೆ ಪಡೆದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…