ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು, ಹಿತವಾದ ಹವಾಮಾನ ಇದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿದ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ.
ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು ಉತ್ತರ ಶ್ರೀಲಂಕಾದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…