ಮೈಸೂರು ನಗರ

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ನಿವಾರಣೆ ಮಾಡುವಂತೆ ಸುರ್ಜೆವಾಲಾ ಬಳಿ ಮನವಿ ಮಾಡಿದ್ದೇನೆ. ರಾಜಕೀಯವಾಗಿ ರಾಜ್ಯದಲ್ಲಿ ಯಾವುದೂ ಸರಿಯಿಲ್ಲ. ರಾಜ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಹೀಗೆ ಆದರೆ ಬೇರೆ ಪಕ್ಷಕ್ಕೂ ನಮ್ಮ ಪಕ್ಷಕ್ಕೂ ಏನು ವ್ಯತ್ಯಾಸ? ಪಕ್ಷದ ಕಾರ್ಯಾಧ್ಯಕ್ಷನಾಗಿ ನನಗೂ ಜವಾಬ್ದಾರಿಗಳಿವೆ. ಅನಾಹುತ ಆಗುವ ಮುನ್ನವೇ ಹೈಕಮಾಂಡ್‌ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಇನ್ನು ಒಂದು ಬಾರಿ ಗೆದ್ದವರು ಸಚಿವರಾಗಬೇಕಾದರೆ, ಆರನೇ ಬಾರಿ ಗೆದ್ದವರು ಸಿಎಂ ಆಗಬಾರದಾ? ರಾಜ್ಯದಲ್ಲಿ ಹಾವು ಮುಂಗುಸಿ ಆಟ ನಡೆಯುತ್ತಿದೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್‌. ಈ ಕುರಿತು ವರಿಷ್ಠರ ಗಮನಕ್ಕೆ ತಂದಿರುವೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago